ಪ್ರಿಯ ನಾಗರಿಕ ಬಂಧುಗಳೆ :-ಅಪರಾಧ ನಡೆದ ಸ್ಥಳವನ್ನು ಸಂರಕ್ಷಿಸಿ, ಅಪರಾಧ ಪತ್ತೆಗೆ ಸಹಕರಿಸಿ- ಸಂಚಾರಿ ನಿಯಮವನ್ನು ಪಾಲಿಸಿ- ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ-ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ- ವಾಹನ ಚಾಲನಾ ಪರವಾನಿಗೆ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧ- ಅಪ್ರಾಪ್ತ ವಯಸ್ಸಿನ ಮಕ್ಕಳು ಚಾಲನಾ ಪರವಾನೆಗೆ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧ-ಕಾನೂನುಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ-ಬೆಲೆ ಬಾಳುವ ಆಭರಣಗಳನ್ನು ಪ್ರದರ್ಶಿಸಬೇಡಿ
ಮೈಸೂರು ಜಿಲ್ಲೆಯ ಸಮಸ್ತ ನಾಗರಿಕ ಬಂಧುಗಳೆ, ನಿಮ್ಮ ಹಾಗೂ ನಿಮ್ಮ ಹಳ್ಳಿ, ನಗರಕ್ಕೆ ಸಂಬಂಧಿಸಿದಂತೆ ಯಾವುದೇ ದೂರು, ಸಮಸ್ಯೆ, ಸಲಹೆ ಹಾಗೂ ಮಾಹಿತಿಗಳಿದ್ದಲ್ಲಿ ಈ ಕೆಳಕಂಡ PHONE AND ADDRESS ನಲ್ಲಿರುವ ದೂರವಾಣಿಗೆ ತಿಳಿಸುವುದರ ಮೂಲಕ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕಾಗಿ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರು

Sunday, March 30, 2025

ದೈನಂದಿನ ಅಪರಾಧಗಳ ಮಾಹಿತಿ 30.03.2025

 ಇಲವಾಲ ಪೊಲೀಸ್‌ ಠಾಣಾ ಸರಹದ್ದು ಕೆ ಆರ್‌ ಎಸ್‌ ಬೈಪಾಸ್‌ ರಸ್ತೆಯಲ್ಲಿರುವ ಲೈಟ್‌ ಹೌಸ್‌ ಬಾರ್‌ ಅಂಡ್‌ ರೆಸ್ಟೋರೆಂಟ್‌ ಹಿಂಬಾಗ ಸಾರ್ವಜನಿಕ ಸ್ಥಳದಲ್ಲಿ ಅಂದರ್‌ - ಬಾಹರ್‌ ಆಟವಾಡುತ್ತಿದ್ದು ಬಾತೀದಾರರ ದೂರಿನ ಮೇರೆಗೆ ಪಿಎಸ್‌ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ 52 ಇಸ್ಪೀಟ್‌ ಎಲೆ 51,140/- ರೂ ನಗದನ್ನು ವಶಪಡಿಸಿಕೊಂಡು 04 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.

ಹುಣಸೂರು ಪಟ್ಟಣ ಠಾಣಾ ಸರಹದ್ದು ಬಾಲಕರ ಪದವಿ ಪೊರ್ವ ಕಾಲೇಜ್ ಎದುರು ಹುಣಸೂರು ಟೌನಿನ ವಾಸಿ ಪಿರ್ಯಾದಿಯವರ ಮನೆಯಲ್ಲಿ ಯಾರೋ ಕಳ್ಳರು ಮನೆಯ ಬಾಗಿಲು ಹೊಡೆದು ಚಿನ್ನ ಹಾಗೂ ಬೆಳ್ಳಿಯ ಸಾಮಾನುಗಳನ್ನು ಕಳ್ಳತನ ಮಾಡಿರುತ್ತಾರೆ ಅದರ ಬೆಲೆ 1,49,000/- ರೂ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಬೈಲುಕುಪ್ಪೆ ಪೊಲೀಸ್‌ ಠಾಣಾ ಸರಹದ್ದು ಮರಡಿಯೂರು ಗ್ರಾಮದ ಪಿರ್ಯಾದಿಯವರ ಮಗಳು ಕಾಣೇಯಾಗಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ನಂಜನಗೂಡು ಗ್ರಾಮಾಂತರ ಪೊಲೀಸ್‌ ಠಾಣಾ ಸರಹದ್ದು ಅಂಡುವಿನಹಳ್ಳಿ ಗ್ರಾಮದ  ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಜೂಜಾಟ ಆಟವಾಡುತ್ತಿದ್ದು ಬಾತೀದಾರರ ದೂರಿನ ಮೇರೆಗೆ ಪಿಎಸ್‌ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ  4-5 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.

ಮೈಸೂರು ದಕ್ಷಿಣ ಪೊಲೀಸ್‌ ಠಾಣಾ ಸರಹದ್ದು ಕೊಪ್ಪಲೂರು ಗ್ರಾಮದ ಸಿದ್ದಲಿಂಗೇಶ್ವರ ಬಡವಾಣೆಯ  ಹಿಂಬಾಗ ಸಾರ್ವಜನಿಕ ಸ್ಥಳದಲ್ಲಿ ಅಂದರ್‌ - ಬಾಹರ್‌ ಆಟವಾಡುತ್ತಿದ್ದು ಬಾತೀದಾರರ ದೂರಿನ ಮೇರೆಗೆ ಪಿಎಸ್‌ಐ ಹಾಗೂ ಸಿಬ್ಬಂದಿಗಳು ದಾಳಿಮಾಡಿ 52 ಇಸ್ಪೀಟ್‌ ಎಲೆ 17,130/- ರೂ ನಗದನ್ನು ವಶಪಡಿಸಿಕೊಂಡು 14 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.


No comments:

Post a Comment

NOTICE

ಸಾರ್ವಜನಿಕರಲ್ಲಿ ಮನವಿ

ಪೊಲೀಸರು ಇರುವುದು ನಿಮ್ಮ ಸೇವೆ ಹಾಗೂ ರಕ್ಷಣೆಗಾಗಿ, ಅಪರಾಧವನ್ನು ಶಿಕ್ಷಿಸಲು, ಅಪರಾಧಿಯನಲ್ಲ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಎತ್ತಿಹಿಡಿಯಲು ಸುರಕ್ಷಿತ ಸಮಾಜ ನಿರ್ಮಾಣ ನಮ್ಮ ನಿಮ್ಮೆಲ್ಲರ ಜವಾಬ್ದಾರಿ ನಮ್ಮೊಂದಿಗೆ ಕೈ ಜೋಡಿಸಿ.

ಮಾಹಿತಿ ಫಲಕವನ್ನು ತಪ್ಪದೇ ಓದಿ ಮತ್ತು ಪಾಲಿಸಿ ಹಾಗೂ ಇತರರಿಗೂ ತಿಳಿಸಿ.

ಪೊಲೀಸ್ ಅಧೀಕ್ಷಕರು, ಮೈಸೂರು ಜಿಲ್ಲೆ, ಮೈಸೂರು

CRIME PREVENTION

CRIME PREVENTION
ಅಪರಾಧ ತಡೆ