ಪ್ರಿಯ ನಾಗರಿಕ ಬಂಧುಗಳೆ :-ಅಪರಾಧ ನಡೆದ ಸ್ಥಳವನ್ನು ಸಂರಕ್ಷಿಸಿ, ಅಪರಾಧ ಪತ್ತೆಗೆ ಸಹಕರಿಸಿ- ಸಂಚಾರಿ ನಿಯಮವನ್ನು ಪಾಲಿಸಿ- ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ-ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ- ವಾಹನ ಚಾಲನಾ ಪರವಾನಿಗೆ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧ- ಅಪ್ರಾಪ್ತ ವಯಸ್ಸಿನ ಮಕ್ಕಳು ಚಾಲನಾ ಪರವಾನೆಗೆ ಇಲ್ಲದೆ ವಾಹನ ಚಾಲನೆ ಮಾಡುವುದು ಅಪರಾಧ-ಕಾನೂನುಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ-ಬೆಲೆ ಬಾಳುವ ಆಭರಣಗಳನ್ನು ಪ್ರದರ್ಶಿಸಬೇಡಿ
ಮೈಸೂರು ಜಿಲ್ಲೆಯ ಸಮಸ್ತ ನಾಗರಿಕ ಬಂಧುಗಳೆ, ನಿಮ್ಮ ಹಾಗೂ ನಿಮ್ಮ ಹಳ್ಳಿ, ನಗರಕ್ಕೆ ಸಂಬಂಧಿಸಿದಂತೆ ಯಾವುದೇ ದೂರು, ಸಮಸ್ಯೆ, ಸಲಹೆ ಹಾಗೂ ಮಾಹಿತಿಗಳಿದ್ದಲ್ಲಿ ಈ ಕೆಳಕಂಡ PHONE AND ADDRESS ನಲ್ಲಿರುವ ದೂರವಾಣಿಗೆ ತಿಳಿಸುವುದರ ಮೂಲಕ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕಾಗಿ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರು

Saturday, December 20, 2025

ದೈನಂದಿನ ಅಪರಾಧಗಳ ಮಾಹಿತಿ 20.12.2025

ಜಯಪುರ  ಪೊಲೀಸ್‌ ಠಾಣಾ ಸರಹದ್ದು  ಮರಟಿಕ್ಯಾತನಹಳ್ಳಿ ಬಳಿ ಇರುವ ಭಾರತಿ ಎನ್ ಕ್ಲೇವ್‌ ಬಳಿ ಹಣವನ್ನು  ಪಣವಾಗಿ ಕಟ್ಟಿಕೊಂಡು ಅಂದರ್‌ ಬಾಹರ್‌ ಇಸ್ಪೀಟು ಆಡುತ್ತಿದ್ದಾರೆ ಎಂದು ಬಾತ್ಮೀಯದಾರರು ನೀಡಿದ ಮಾಹಿತಿ ಮೇರೆಗೆ ಪಿ ಎಸ್‌ ಐ ರವರು ಸಿಬ್ಬಂದಿ ಸಂಮೇತ ದಾಳಿ ಮಾಡಿ 5770/- ರೂ ಹಣವನ್ನು ವಶಪಡಿಸಿಕೊಂಡು 06 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.

ವರುಣ ಪೊಲೀಸ್‌ ಠಾಣಾ ಸರಹದ್ದು ಕಿರಾಳು ಗ್ರಾಮ ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 1,45,000/- ರೂ ಬೆಲೆಬಾಳುವ ಚಿನ್ನಾಭರಣವನ್ನು ಮತ್ಯಾತು ನಗದನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಕೆ ಆರ್‌ ನಗರ  ಪೊಲೀಸ್‌ ಠಾಣಾ ಸರಹದ್ದು ಬಜಾರ್‌ ರೋಡ್‌ ಕೆ ಆರ್‌  ನಗರ ವಾಸಿ ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಕೆ ಆರ್‌ ನಗರ  ಪೊಲೀಸ್‌ ಠಾಣಾ ಸರಹದ್ದು  ಕೆ ಎಸ್‌ ಆರ್‌ ಟಿ ಸಿ ಬಸ್‌ ನಿಲ್ದಾಣದ ಬಳಿ ಪಿರ್ಯಾದಿಯವರ ಬೈಕ್‌ ನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.

ಹುಲ್ಲಹಳ್ಳಿ ಪೊಲೀಸ್‌ ಠಾಣಾ ಸರಹದ್ದು ನಲ್ಲಿ ತಾಳಪುರ ಗ್ರಾಮ ಸಾರ್ವಜಿನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಯಾವುದೇ ಪರವಾನಿಗೆ ಪಡೆಯದೆ ಮದ್ಯ ಕುಡುಯಲು ಸ್ಥಳಾವಕಾಶ ಮಾಡಿಕೊಟ್ಟ ಮೇರೆಗೆ ಮದ್ಯವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುತ್ತಾರೆ.




No comments:

Post a Comment

NOTICE

ಸಾರ್ವಜನಿಕರಲ್ಲಿ ಮನವಿ

ಪೊಲೀಸರು ಇರುವುದು ನಿಮ್ಮ ಸೇವೆ ಹಾಗೂ ರಕ್ಷಣೆಗಾಗಿ, ಅಪರಾಧವನ್ನು ಶಿಕ್ಷಿಸಲು, ಅಪರಾಧಿಯನಲ್ಲ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಎತ್ತಿಹಿಡಿಯಲು ಸುರಕ್ಷಿತ ಸಮಾಜ ನಿರ್ಮಾಣ ನಮ್ಮ ನಿಮ್ಮೆಲ್ಲರ ಜವಾಬ್ದಾರಿ ನಮ್ಮೊಂದಿಗೆ ಕೈ ಜೋಡಿಸಿ.

ಮಾಹಿತಿ ಫಲಕವನ್ನು ತಪ್ಪದೇ ಓದಿ ಮತ್ತು ಪಾಲಿಸಿ ಹಾಗೂ ಇತರರಿಗೂ ತಿಳಿಸಿ.

ಪೊಲೀಸ್ ಅಧೀಕ್ಷಕರು, ಮೈಸೂರು ಜಿಲ್ಲೆ, ಮೈಸೂರು

CRIME PREVENTION

CRIME PREVENTION
ಅಪರಾಧ ತಡೆ