ಜಯಪುರ ಪೊಲೀಸ್ ಠಾಣಾ ಸರಹದ್ದು ಮರಟಿಕ್ಯಾತನಹಳ್ಳಿ ಬಳಿ ಇರುವ ಭಾರತಿ ಎನ್ ಕ್ಲೇವ್ ಬಳಿ ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್ ಬಾಹರ್ ಇಸ್ಪೀಟು ಆಡುತ್ತಿದ್ದಾರೆ ಎಂದು ಬಾತ್ಮೀಯದಾರರು ನೀಡಿದ ಮಾಹಿತಿ ಮೇರೆಗೆ ಪಿ ಎಸ್ ಐ ರವರು ಸಿಬ್ಬಂದಿ ಸಂಮೇತ ದಾಳಿ ಮಾಡಿ 5770/- ರೂ ಹಣವನ್ನು ವಶಪಡಿಸಿಕೊಂಡು 06 ಜನರ ಮೇಲೆ ಪ್ರಕರಣ ದಾಖಲಿಸಿರುತ್ತಾರೆ.
ವರುಣ ಪೊಲೀಸ್ ಠಾಣಾ ಸರಹದ್ದು ಕಿರಾಳು ಗ್ರಾಮ ವಾಸಿ ಪಿರ್ಯಾದಿಯವರ ಬಾಬ್ತು ಸುಮಾರು 1,45,000/- ರೂ ಬೆಲೆಬಾಳುವ ಚಿನ್ನಾಭರಣವನ್ನು ಮತ್ಯಾತು ನಗದನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಬಜಾರ್ ರೋಡ್ ಕೆ ಆರ್ ನಗರ ವಾಸಿ ಪಿರ್ಯಾದಿಯವರ ಮಗಳು ಕಾಣೆಯಾಗಿದ್ದಾನೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಕೆ ಆರ್ ನಗರ ಪೊಲೀಸ್ ಠಾಣಾ ಸರಹದ್ದು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಪಿರ್ಯಾದಿಯವರ ಬೈಕ್ ನ್ನು ಯಾರೋ ಕಳ್ಳರು ಕಳ್ಳತನ ಮಾಡಿರುತ್ತಾರೆ ಎಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುತ್ತಾರೆ.
ಹುಲ್ಲಹಳ್ಳಿ ಪೊಲೀಸ್ ಠಾಣಾ ಸರಹದ್ದು ನಲ್ಲಿ ತಾಳಪುರ ಗ್ರಾಮ ಸಾರ್ವಜಿನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಯಾವುದೇ ಪರವಾನಿಗೆ ಪಡೆಯದೆ ಮದ್ಯ ಕುಡುಯಲು ಸ್ಥಳಾವಕಾಶ ಮಾಡಿಕೊಟ್ಟ ಮೇರೆಗೆ ಮದ್ಯವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿರುತ್ತಾರೆ.

No comments:
Post a Comment